Murder by ವಸುಧೇಂದ್ರ
…..
‘ಸಾರ್ …. ವಸುಧೇಂದ್ರ ಬಂದ್ರು !’ ಅಂದ್ಲು ಹುಡುಗಿ.
ಸಧ್ಯ ಬದುಕಿದೆ ಅಂದುಕೊಂಡು ಕ್ಯಾಶ್ ಕೌಂಟರ್ ಗೆ ಹೋದೆ ,ಅಲ್ಲಿ ವಸುಧೇಂದ್ರ ಮತ್ತೆ ಅಪಾರ ,ಪ್ರಕಾಶ್ ಕಂಬತ್ತಳಿಯವರೊಡನೆ ಮಾತಾಡಿಕೊಂಡು ನಿಂತಿದ್ರು !
ನಾನು ಕ್ಯಾಶ್ ಕೌಂಟರ್ ಬಳಿ ಹೋಗಿ ಟೇಬಲ್ ಮೇಲೆ ಪುಸ್ತಕಗಳನ್ನಿಟ್ಟೆ .ಅಷ್ಟರಲ್ಲಿ ವಸುಧೇಂದ್ರ ,ಅಪಾರ ಹೊರಟು ನಿಂತರು.
‘ಸರ್…. ಆಟೋಗ್ರಾಫ್ ಪ್ಲೀಸ್ ’ ಅಂದೆ .
ವಸುಧೇಂದ್ರ ನಗುತ್ತಾ ಕೈ ಚಾಚಿ ’ಏನ್ ಹೆಸರು ’ ಅಂದ್ರು .
ಸಂದೀಪ್ ಕಾಮತ್ ಅಂದೆ. ಥಟ್ಟನೆ ’ಒಹ್ ನೀನಾ ಸಂದೀಪ್ ಕಾಮತ್ ! ನೀನು ’ಹಂಪಿ ಎಕ್ಸ್ಪ್ರೆಸ್’ ಬಗ್ಗೆ ನಂಗೆ ಮೇಲ್ ಮಾಡಿದ್ದೆ ಅಲ್ವಾ ?’ ಅಂತ ಕೇಳಿದ್ರು.
’ಹೌದು ಸರ್, ಅದು ನಾನೆ ’ ಅಂದೆ .
’ಹಂಪಿ ಎಕ್ಸ್ ಪ್ರೆಸ್’ ತುಂಬಾ ಇಷ್ಟ ಆಯ್ತು ಅಂತ ವಸುಧೇಂದ್ರರಿಗೆ ಮೇಲ್ ಮಾಡಿದ್ದೆ ನಾನು.ಜೊತೆಗೆ ಅದರಲ್ಲಿ ’ ಸರ್ ಕಥೆಗಾರರಾದ ನೀವು ಬ್ರಹ್ಮ-ವಿಷ್ಣು-ಮಹೇಶ್ವರ ಮೂರೂ ಆಗಿರ್ತೀರಾ . ಮತ್ತೆ ಯಾಕೆ ಸರ್ ಸುಜಾಳ ಗಂಡ ಶ್ರೀನಿವಾಸ ನಂಬೂದರಿಯ ಕೊಲೆ ಮಾಡಿದ್ರಿ ’ನೀವು’ ? ನಿಜ ಜೀವನದಲ್ಲಂತೂ ಬರೀ ಟ್ರಾಜೆಡಿಗಳೇ ಇರೋದು ಕೊನೆಪಕ್ಷ ಕಥೆಗಳಲ್ಲಾದ್ರೂ ಸುಖಾಂತ್ಯ ಮಾಡೋದಲ್ವಾ ? ಅಂತ ಗಂಭೀರವಾದ ಕೊಲೆ ಆರೋಪವನ್ನೂ ಹಾಕಿದ್ದೆ ಅವರ ಮೇಲೆ!
‘ಹಂಪಿ ಎಕ್ಸ್ ಪ್ರೆಸ್’ ನ ’ಕ್ಷಮೆಯಿಲ್ಲದೂರಿನಲ್ಲಿ’ ಅನ್ನೋ ಕಥೆಯಲ್ಲಿ ಸುಜಾಳ ಗಂಡನ ಕೊಲೆ ಆಗುತ್ತೆ .ಅಂಥ ಟ್ರಾಜೆಡಿ ಅಂತ್ಯದ ಬಗ್ಗೆ ನನಗೆ ಅಸಮಧಾನವಿತ್ತು.ಅದನ್ನೇ ಅವರಿಗೆ ಮೇಲ್ ನಲ್ಲಿ ಬರೆದಿದ್ದೆ.ಬರೆದ ಮೇಲೆ ’ಛೇ ಕಥೆಗಾರರಿಗೆ ಅಂಥ ನಿರ್ಬಂಧ ಹಾಕಿದ್ರೆ ಸರಿ ಅಲ್ಲ ’ ಅಂತ ಬೇಜಾರಾಗಿತ್ತು ನಂಗೆ……
ಸಂಪೂರ್ಣ ಓದಿಗೆ ಭೇಟಿ ಕೊಡಿ: ಕಡಲತೀರ 
No comments yet.
Leave a comment
-
Archives
- December 2009 (2)
- November 2009 (6)
- October 2009 (2)
- September 2009 (1)
- July 2009 (1)
- June 2009 (1)
- May 2009 (1)
- April 2009 (4)
- March 2009 (10)
- February 2009 (13)
- January 2009 (9)
- December 2008 (7)
-
Categories
-
RSS
Entries RSS
Comments RSS
